ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

0

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.7 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಬಿ.. ಶಿರ್ಲಾಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಂದಿನ ಸಾಲಿಗೆ ನೂತನ ಅಧ್ಯಕ್ಷರಾಗಿ ಹೃಷಿಕೇಶ್ ಧರ್ಮಸ್ಥಳ, ಕಾರ್ಯದರ್ಶಿ ಯಾಗಿ ಪ್ರಸಾದ್ ಏಣಿಂಜೆ, ಕೋಶಾಧಿಕಾರಿ ಯಾಗಿ ತುಕಾರಾಮ ಬಿ. ಆಯ್ಕೆಯಾದರು.


ಉಪಾಧ್ಯಕ್ಷರಾಗಿ ಅರವಿಂದ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಪದ್ಮನಾಭ ವೇಣೂರು ಆಯ್ಕೆಯಾದರು. ಚುನಾವಣೆ ಅಧಿಕಾರಿ ಯಾಗಿ ಹಿರಿಯ ಪತ್ರಕರ್ತ ನಾಭಿರಾಜ್ ಪೂವಣಿ ನಿರ್ವಹಿಸಿದರು. ಕಾರ್ಯದರ್ಶಿ ಚೈತ್ರೆಶ್ ಇಳಂತಿಲ ವರದಿ ವಾಚಿಸಿ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ ಲೆಕ್ಕ ಪತ್ರ ವಾಚಿಸಿದರು.

LEAVE A REPLY

Please enter your comment!
Please enter your name here