Site icon Suddi Belthangady

ಕೋಟ್ಯಂತರ ರೂ. ಬೆಲೆಬಾಳುವ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಬೆಳ್ತಂಗಡಿಯ ಇಬ್ಬರು ಬಂಧನ

ಬೆಳ್ತಂಗಡಿ: ಕೋಟ್ಯಂತರ ರೂ. ಬೆಲೆಬಾಳುವ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಜ.8 ರಂದು ಬಂಧಿಸಿದ್ದಾರೆ.

ಲಾಲ್‌ಬಾಗ್‌ನ ಕರಾವಳಿ ಮೈದಾನ ಪರಿಸರದಲ್ಲಿ ಅಂಬರ್, ಗ್ರೀಸ್ ಮಾರಲು ಯತ್ನಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್‌ಸ್ಪೆಕ್ಟರ್ ಶ್ಯಾಮ್‌ಸುಂದರ್ ಎಚ್.ಎಂ. ನೇತೃತ್ವದಲ್ಲಿ ಪಿಎಸ್ ಐಗಳಾದ ರಾಜೇಂದ್ರ ಬಿ., ಸುದೀಪ್ ಎಂ.ವಿ. ಮತ್ತು ಸಿಬಂದಿ ದಾಳಿ ನಡೆಸಿದರು.

ಗುರುವಾಯನಕೆರೆ ಕುವೆಟ್ಟು ಗ್ರಾಮದ ನಿಮಿತ್(26ವ) ಪುಂಜಾಲಕಟ್ಟೆ ಕುಕ್ಕಳ ಮನೆ ಯೋಗೀಶ್ ಪೂಜಾರಿ (41) ಬಂಧಿತರು. ಅವರಿಂದ 3.2 ಕೆಜಿ ತೂಕದ ಅಂಬರ್- ಗ್ರೀಸ್ ವಶಪಡಿಸಿಕೊಳ್ಳಲಾಗಿದೆ. ಇದಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 3.2 ಕೋ.ರೂ. ಬೆಲೆ ಇದೆ. ಆರೋಪಿಗಳಿಂದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version