ಸೌತಡ್ಕ ಶ್ರೀ ದುರ್ಗಾಪರಮೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಯಕ್ಷಗಾನ ಮತ್ತು ಸನ್ಮಾನ ಕಾರ್ಯಕ್ರಮ

0

ಕೊಕ್ಕಡ: ಶ್ರೀ ದುರ್ಗಾಪರಮೇಶ್ವರಿ ಸೇವಾ ಟ್ರಸ್ಟ್ ಸೌತಡ್ಕ ಹಾಗೂ ಊರ ಪರವೂರ ಭಕ್ತಾದಿಗಳ ಸೇವಾರ್ಥವಾಗಿ 10ನೇ ವರ್ಷದ ಸೇವೆಯಾರ್ಥ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವು ಜ.7 ರಂದು ಜರುಗಿತು.


ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ವೇ| ಮೂ| ಅನಂತ ಪದ್ಮನಾಭ ಅಸ್ರಣ್ಣರು ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಸೌತಡ್ಕ ದೇವಸ್ಥಾನದ ಅರ್ಚಕರಾದ ಸತ್ಯಪ್ರಿಯಾ ಕಲ್ಲೂರಾಯ ಉಪಸ್ಥಿತರಿದ್ದರು.


ಈ ಸಂದರ್ಭ ಸೇವಾಕರ್ತರಾದ ಜಾರಪ್ಪ ಗೌಡ ಸಂಕೇಶ ದಂಪತಿಗಳನ್ನು, ಸೇವೆಯಾಟವನ್ನು ಪ್ರತೀ ವರ್ಷ ಮುನ್ನಡೆಸುತ್ತಿರುವ ಟ್ರಸ್ಟ್ ಅಧ್ಯಕ್ಷ ದಾಮೋದರ ಶೆಟ್ಟಿ ನೂಜೆ ಹಾಗೂ ಕಾರ್ಯದರ್ಶಿ ದಿನೇಶ್ ಭಟ್ ರವರನ್ನು ಅಸ್ರಣ್ಣರು ಸನ್ಮಾನಿಸಿದರು.

LEAVE A REPLY

Please enter your comment!
Please enter your name here