Site icon Suddi Belthangady

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಗರ್ಭಪಾತ ಪ್ರಕರಣ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳಿಂದ ಠಾಣೆಗೆ ಮನವಿ

ಬೆಳ್ತಂಗಡಿ : ಟಿ. ವಿ. ನೋಡಲು ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆಯನ್ನು ಗರ್ಭವತಿಯಾಗಿರುವುದನ್ನು ತಿಳಿದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಕೂಡಲೇ ಭಂದಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಲೂಕಿನ ಬಿಲ್ಲವ ಸಂಘಟನೆಯವರು ಜ.9 ರಂದು ಬೆಳ್ತಂಗಡಿ ಠಾಣೆಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್, ಉಪಾಧ್ಯಕ್ಷ ಶೇಖರ ಬಂಗೇರ, ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್, ನಿರ್ದೇಶಕರುಗಳಾದ ದಿನೇಶ್ ಕೋಟ್ಯಾನ್, ಯಶೋಧರ, ಗೋಪಾಲ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಕಾರ್ಯದರ್ಶಿ ಶಂಭಾವಿ ಬಂಗೇರ, ಮಾಜಿ ಅಧ್ಯಕ್ಷೆ ರಾಜಶ್ರೀ ರಮಣ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಎಚ್., ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್, ಕಾರ್ಯದರ್ಶಿ ಸುನಿಲ್ ಕನ್ಯಾಡಿ ಮಾಜಿ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಕೇಂದ್ರ ಸಮಿತಿ ನಿರ್ದೇಶಕ ಎಂ. ಕೆ. ಪ್ರಸಾದ್, ವೇಣೂರು ಘಟಕದ ಅಧ್ಯಕ್ಷೆ ಹರಿಣಿ ಕರುಣಾಕರ ಪೂಜಾರಿ, ಕಾರ್ಯದರ್ಶಿ ಸುಜಿತ್, ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಕುಕ್ಕೇಡಿ, ಕಾನೂನು ಸಲಹೆಗಾರ ಮನೋಹರ್ ಇಳಂತಿಲ, ಪ್ರಶಾಂತ್ ಮಚ್ಚಿನ, ರಮಾನಂದ ಮುಂಡೂರು, ಶಾಂತ ಬಂಗೇರ, ಗುರುರಾಜ್ ಗುರಿಪಳ್ಳ, ಪ್ರಶಾಂತ್ ಜಶನ್, ಸುರೇಂದ್ರ ಬಂಗಾಡಿ ಮೊದಲದವರು ಉಪಸ್ಥಿತರಿದ್ದರು

Exit mobile version