ನಾವರ: ಜಾತ್ರಾ ಮಹೋತ್ಸವದ ಅಂಗವಾಗಿ ಸ್ವಚ್ಚತಾ ಆಂದೋಲನ

0

ನಾವರ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ ಇದರ ಜಾತ್ರಾ ಮಹೋತ್ಸವದ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಪ್ರಗತಿ ಬಂಧು ಒಕ್ಕೂಟ ನಾವರ , ಜ್ಞಾನ ವಿಕಾಸ ತಂಡ ನಾವರ ಇದರ ವತಿಯಿಂದ ದೇವಸ್ಥಾನದ ಸುತ್ತ ಮುತ್ತ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಶೆಟ್ಟಿ, ಸೇವಾ ಪ್ರತಿನಿಧಿ ಪುಷ್ಪಾವತಿ, ಚಂದಪ್ಪ ಪೂಜಾರಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ರಾಜು ಸಾಲ್ಯಾನ್, ನಿತ್ಯಾನಂದ ಯೋಗಕ್ಷೇಮ ನಾವರ, ಪ್ರಗತಿ ಬಂಧು ಒಕ್ಕೂಟ ಅಧ್ಯಕ್ಷ ದೇಜಪ್ಪ ದೇವಾಡಿಗ ರವಿ ಪೂಜಾರಿ, ಪೂರ್ಣಿಮಾ , ಪ್ರಶಾಂತ್ ಹಿಮರಡ್ಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here