ಮಡಂತ್ಯಾರು :ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

0


ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಜ. 12 ರಂದು ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪ್ರೊ.ಪ್ರಕಾಶ್ ಕ್ರಮಧಾರಿ ಇವರು ಸ್ವಾಮಿ ವಿವೇಕಾನಂದರ ನುಡಿಗಳು ಇಂದಿಗೂ ಪ್ರಸ್ತುತ ಎಂದು ಹೇಳುವ ಮುಖಾಂತರ ಯುವ ಜನತೆಯ ಕುರಿತು ಅರಿವು ಮೂಡಿಸಿದರು.
ಅಧ್ಯಕ್ಷತೆಯನ್ನು ವಹಿಸಿ ಉಪ ಪ್ರಾಂಶುಪಾಲರಾದ ಪ್ರೊ. ಪೌಲ್ ಮಿನೇಜಸ್ ಇವರು ಯುವಜನತೆಗೆ ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ರಾಷ್ಟ್ರ ನಿರ್ಮಾಣಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ಪ್ರೊ. ಅರುಣ್ ಜಾನ್ಸನ್ ಬ್ರಾಂಕೊ, ಪ್ರೊ.ಪ್ರಶಾಂತ್, ಪ್ರೊ. ರಕ್ಷಿತ ಶೆಟ್ಟಿ, ಪ್ರೊ ಜೀವಾ .ವಿ.ಸಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯ್ರಮವನ್ನು ಸ್ವಯಂ ಸೇವಕಿಯಾದ ಕು.ಸಿಂಥಿಯಾ ನಿರೂಪಿಸಿದರು, ಪ್ರೊ . ಪ್ರಶಾಂತ್ ಸ್ವಾಗತಿಸಿ ಕುಮಾರಿ ಸೌoದರ್ಯ ವಂದಿಸಿದರು.

LEAVE A REPLY

Please enter your comment!
Please enter your name here