ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

0

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಸರಕಾರಿ ಪದವಿ ಪೂರ್ವ ಕಾಲೇಜು, ನಡ ಇಲ್ಲಿನ ಉಪನ್ಯಾಸಕರಾದ ಶ್ರೀಮತಿ ವಸಂತಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ವಿವೇಕಾನಂದರ ತತ್ವ, ಆದರ್ಶ ಹಾಗೂ ಜೀವನದ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಪ್ರಾಂಶುಪಾಲರಾದ ಡಾ.ಸುಬ್ರಹ್ಮಣ್ಯ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಪ್ರೋ. ಗಂಗಾಧರ್, ಡಾ.ಸುಮನ್ ಶೆಟ್ಟಿ ಹಾಗೂ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್ ಉಪಸ್ಥಿತರಿದ್ದರು. ಕು.ವಿನುತ ದ್ವಿತೀಯ ಬಿಕಾಮ್ ಕಾರ್ಯಕ್ರಮ ನಿರೂಪಿಸಿದರು.ದ್ವಿತೀಯ ಬಿಬಿಎ ವೃದ್ಧಿ ಸ್ವಾಗತಿಸಿ, ಪ್ರಥಮ ಬಿಎ ಹರ್ಷಿತಾ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here