ಲಾಯಿಲ: ಶ್ರೀ ಉಲ್ಲಾಳ್ತಿ, ಮೈಸಂದಾಯ, ಪಂಜುರ್ಲಿ ಹಾಗೂ ಗುಳಿಗ ದೈವಗಳ ಬಾಲಾಲಯ ಪ್ರತಿಷ್ಠೆ

0

ಲಾಯಿಲ: ಶ್ರೀ ಉಲ್ಲಾಳ್ತಿ ಮೈಸಂದಾಯ ಪಂಜುರ್ಲಿ ಹಾಗೂ ಗುಳಿಗ ದೈವಗಳ ಸಾನಿಧ್ಯದಲ್ಲಿ ತಂತ್ರಿಗಳಾದ ಸುಬ್ರಹ್ಮಣ್ಯ ಭಟ್ ಕಡೆ ಶಿವಾಲಯ ಇವರ ಸಾರಥ್ಯದಲ್ಲಿ ಪ್ರಾಯಶ್ಚಿತ ಹೋಮಗಳು ಹಾಗೂ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಜ. 14ರಂದು ಪಿಲಿ ಪಂಜರ ಕ್ಷೇತ್ರದಲ್ಲಿ ನಡೆಯಿತು.


ಇದೇ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುವ ದೈವಗಳ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಮತ್ತು ಜೀರ್ಣೋದ್ಧಾರದ ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ಕ್ಷೇತ್ರದಲ್ಲಿ ಅಳವಡಿಸಿರುವ ಸೋಲಾರ್ ಹೈ ಮಾಸ್ಟ್ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾ ನೆರವೇರಿಸಿದರು.


ಈ ಸಂದರ್ಭದಲ್ಲಿ ತಂತ್ರಿಗಳಾದ ಸುಬ್ರಹ್ಮಣ್ಯ ಭಟ್ ಕಡೆ ಶಿವಾಲಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಂಜೀವ ಶೆಟ್ಟಿ ಕುಂಟಿನಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಶಿಬೆಟ್ಟು, ಜೊತೆ ಕೋಶಾಧಿಕಾರಿಗಳಾದ ರಮೇಶ್ ಲಾಯಿಲ, ಲಕ್ಷ್ಮಣ್ ಜಿಎಸ್., ಲಾಯಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ್ ಲಾಯಿಲ, ಸದಸ್ಯರಾದ ಅರವಿಂದ್., ಹರಿಕೃಷ್ಣ ಹಾಗೂ ಊರವರು ಉಪಸ್ಥಿತರಿದ್ದರು.
ಸಮಿತಿಯ ಕಾರ್ಯದರ್ಶಿ ಪುಷ್ಪರಾಜ್ ಕಾರ್ಯಕ್ರಮ ನಿರೂಪಿಸಿ. ಸಮಿತಿಯ ಕೋಶಾಧಿಕಾರಿ ಗಿರೀಶ್ ಡೊಂಗ್ರೆ ಸ್ವಾಗತಿಸಿದರು.

LEAVE A REPLY

Please enter your comment!
Please enter your name here