Site icon Suddi Belthangady

ಬಂಗಾಡಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಇಂದಬೆಟ್ಟು: ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯ ಸೇವಾ ಟ್ರಸ್ಟ್, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಇದರ ವತಿಯಿಂದ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಶ್ರೀ ಮಹಾಗಣಪತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ.14ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಹರೀಶ್ ಪೂಂಜ, ಪ್ರಧಾನ ಗೌರವಾಧ್ಯಕ್ಷ ಬಿ. ಯಶೋಧರ ಬಲ್ಲಾಳ್, ಅಧ್ಯಕ್ಷ ಡಾ| ಪ್ರದೀಪ್ ನಾವೂರು, ಪ್ರಧಾನ ಕಾರ್ಯದರ್ಶಿ ಭಾಸ್ಕರ ಧರ್ಮಸ್ಥಳ, ಶ್ರೀ ಅಷ್ಟಪವಿತ್ರ ನಾಗಲಿಂಗೇಶ್ವರ ದೇವಾಲಯ ಸೇವಾ ಟ್ರಸ್ಟ್ ಅಧ್ಯಕ್ಷ ಪಿ. ತಿಮ್ಮಪ್ಪ ಗೌಡ ಬೆಳಾಲು, ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಧನಂಜಯ ಅಜ್ರಿ, ಸ್ವಾಗತ ಸಮಿತಿಯ ಭುಜಬಲಿ ಧರ್ಮಸ್ಥಳ, ನಾವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್ ನಾವೂರು, ಡಾ| ಶಿವರಾಜ್ ಪಜಿಲ ಬಂಗಾಡಿ, ರಮಾನಂದ ಬಂಗಾಡಿ, ವೆಂಕಪ್ಪ ಮೂಲ್ಯ, ಎ.ಬಿ. ಉಮೇಶ್ ಪ್ರಭು, ಎ.ಎಸ್.ಎನ್ ಭಟ್ ಉಪಸ್ಥಿತರಿದ್ದರು.

Exit mobile version