ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ಅಷ್ಠಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ 4ರಿಂದ 9 ರ ವರೆಗೆ ನಡೆಯಲಿದ್ದು ಇದರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರು,ಪ್ರಧಾನ ಆರ್ಚಕ ಸೋಮನಾಥ ಮಯ್ಯ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ.ಶಶಿಧರ ಡೋಂಗ್ರೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ನೊಚ್ಚ, ಸಮಿತಿ ಪ್ರಮಖರಾದ ಸೋಮನಾಥ ಬಂಗೇರ ವರ್ಪಾಳೆ, ಸದಾನಂದ ಎಂ ನಾವರ,ಸುಭಾಶ್ಚಂದ್ರ ರೈ ಪಡ್ಯೋಡಿ,ವಿಶ್ವನಾಥ ಹೊಳ್ಳ,ಸುರೇಶ್ ಶೆಟ್ಟಿ ಕುರೆಲ್ಯ,ಬೇಬಿ ಪೂಜಾರಿ ಪುಣ್ಕೆತ್ಯಾರು, ನಿರಂಜನ್ ಜೋಶಿ ಸೂಳಬೆಟ್ಟು,ಜಗನ್ನಾಥ ಶೆಟ್ಟಿ, ಸುಧೀರ್ ಆರ್ ಸುವರ್ಣ,ನವೀನ್ ಕೆ ಸಾಮಾನಿ ಕರಂಬಾರು, ಡಾ. ಸುಷ್ಮಾ ಡೋಂಗ್ರೆ,ಸಂತೋಷ್ ಹೆಗ್ಡೆ ತೆಂಕಕಾರಂದೂರು, ರಾಕೇಶ್ ಹೆಗ್ಡೆ ಬಳಂಜ,ಹರೀಶ್ ಬಳಂಜ, ಉಮೇಶ್ ಸುವರ್ಣ ಕಂಬಳದಡ್ಡ,ಪ್ರಭಾಕರ ಪೂಜಾರಿ ಕೊಡಂಗೆ, ಕಮಲೇಶ್ ಉಂಗೀಲಬೈಲು, ಹರೀಶ್ ಆಚಾರ್ಯ, ವಿಜಯ್ ಕುಮಾರ್ ಜೈನ್, ಶಶಿಕಾಂತ್ ಅರ್ವ, ಮೋಹನ್ ದಾಸ್, ಸಂತೋಷ್ ಪಿ ಕೋಟ್ಯಾನ್ ಬಳಂಜ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here