ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯ

0

ಬೆಳ್ತಂಗಡಿ : ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದಲ್ಲಿರುವ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯವಾದ ಘಟನೆ ಜ.18 ಬೆಳಗ್ಗೆ ಸಂಭವಿಸಿದೆ.
ಬೆಳ್ತಂಗಡಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ವಾರ್ತಾ ಭವನ ಕಟ್ಟಡದ ಕೆಳ ಭಾಗ ಕೆಲ ದಿನಗಳ ಹಿಂದೆ ಕುಸಿದಿತ್ತು. ಈ ಬಗ್ಗೆ ಪಟ್ಟಣ ಪಂಚಾಯತ್ ಗೆ ಮೌಖಿಕ ಮಾಹಿತಿ ನೀಡಲಾಗಿತ್ತು.

ಇಂದು ಬೆಳಿಗ್ಗೆ ಪಟ್ಟಣ ಪಂಚಾಯತ್ ನ ಇಬ್ಬರು ಕಾಮಿ೯ಕರು ಕುಸಿದ ಭಾಗದಲ್ಲಿ ಕಟ್ಟಡಕ್ಕೆ ಅಳವಡಿಸಿದ ಕಬ್ಬಿಣದ ಶೀಟ್ ತೆಗಯುವ ಕೆಲಸ ಮಾಡುತ್ತಿದ್ದ ‌ವೇಳೆ ಶೀಟ್ ಸಹಿತ ಮೇಲ್ಭಾಗ ಕುಸಿದು ಬಿದ್ದು ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ. ಗಾಯಳು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬಳಿಕ ಕುಸಿದ ಶೀಟ್ ನ್ನು ತೆರೆವುಗೊಳಿಸಲಾಯಿತು.

LEAVE A REPLY

Please enter your comment!
Please enter your name here