Site icon Suddi Belthangady

ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ – ಒಳ ಚರಂಡಿ ಸಂಸ್ಕರಣಾ ಘಟಕ ಹಾಗೂ ಆತ್ಯಾಧುನಿಕ ಆಂಬ್ಯುಲೆನ್ಸ್ ಮಾಹಿತಿ ಕಾರ್ಯಕ್ರಮ

ಉಜಿರೆಯ ಶ್ರೀ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಯಾಲಿಟಿ ಆಸ್ಪತ್ರೆ ಇವರ ಜಂಟಿ ಆಶ್ರಯದಲ್ಲಿ ಸ್ವಯಂ ಸೇವಕರಿಗೆ ಒಳ ಚರಂಡಿ ಸಂಸ್ಕರಣಾ ಘಟಕ ಹಾಗೂ ಅತ್ಯಾಧುನಿಕ ಆಂಬ್ಯುಲೆನ್ಸ್ ಹಾಗೂ ತುರ್ತು ಚಿಕಿತ್ಸೆಯಲ್ಲಿ ಆಂಬ್ಯುಲೆನ್ಸ್ ಬಳಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಆಸ್ಪತ್ರೆಯ ನರ್ಸಿಂಗ್ ಸುಪರಿಡೆಂಟ್ ಶ್ರೀಮತಿ ಶೆರ್ಲಿ ಸ್ವಾಗತಿಸಿ, ಬೇರೆ ಬೇರೆ ವಿಭಾಗದ ಕಾರ್ಯವಿಧಾನಗಳನ್ನು ಪ್ರತ್ಯೇಕವಾಗಿ ತಿಳಿಸಲಾಯಿತು. ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ಸೌಮ್ಯ ಮಾಹಿತಿಯ ನೇತೃತ್ವವನ್ನು ವಹಿಸಿದ್ದರು, ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ ಹಾಗೂ ಯುವ ರೆಡ್ ಕ್ರಾಸ್ ಉಪ ಕಾರ್ಯಕ್ರಮಾಧಿಕಾರಿ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

Exit mobile version