Site icon Suddi Belthangady

ಜ.22: “ಪ್ರಜಾಧ್ವನಿ ಯಾತ್ರೆ”ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೂರ್ವ ಸಮಾಲೋಚನ ಸಭೆ

ಬೆಳ್ತಂಗಡಿ: ಬೆಳ್ತಂಗಡಿಯ ನಗರ ಮತ್ತು ಗ್ರಾಮೀಣ ಬ್ಲಾಕ್ ನ ವತಿಯಿಂದ ಜ.22 ರಂದು ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ “ಪ್ರಜಾಧ್ವನಿ ಯಾತ್ರೆ”ಯ ಪೂರ್ವ ಸಮಾಲೋಚನ ಸಭೆಯು ಗುರುನಾರಾಯಣ ಸ್ವಾಮಿ ಸಭಾಂಗಣದಲ್ಲಿ ಜ.19 ರಂದು ನಡೆಯಿತು.

ಸಭೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಪ್ರಜಾಧ್ವನಿ ಯಾತ್ರೆ ಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕಾರ್ಯಕರ್ತರಿಗೆ ಕರೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ಮಾಜಿ ಸಚಿವ ಗಂಗಾಧರ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ , ರಂಜನ್ ಗೌಡ ಹಾಗೂ ಕಾಂಗ್ರೆಸ್ ನ ಪ್ರಮುಖ ಮುಖಂಡರುಗಳು ಕಾರ್ಯಕರ್ತರ ಸಭೆಯಲ್ಲಿ ಉಪಸ್ಥಿತರಿದ್ದರು.

Exit mobile version