ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಅನಿರ್ಧಿಷ್ಟ ಧರಣಿ, ತಾಲೂಕಿನಿಂದ 50ಕ್ಕೂ ಹೆಚ್ಚು ಕಾರ್ಯಕರ್ತೆಯರು ಭಾಗಿ

0

ಬೆಳ್ತಂಗಡಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರು ಸಂಘದ ವತಿಯಿಂದ ಜ.18 ರಿಂದ ಬೆಂಗಳೂರಿನಲ್ಲಿ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ಪ್ರಾರಂಭಗೊಂಡಿದೆ.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾರಂಭದಲ್ಲಿ ಬೆಂಗಳೂರು ಸಿಟಿ ರೈಲ್ವೇ ನಿಲ್ದಾಣದ ಮುಂಭಾಗದಿಂದ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ಪ್ರಾರಂಭಿಸಿದರು. ಬೆಳ್ತಂಗಡಿ ತಾಲೂಕಿನ ಸುಮಾರು 50ಕ್ಕೂ ಹೆಚ್ಚು ಮಂದಿ ಕಾರ್ಯಕರ್ತೆಯರು, ಸಹಾಯಕಿಯರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here