ಪಜಿರಡ್ಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಿದ್ಧತಾ ಕಾರ್ಯ ಹರೀಶ್ ಪೂಂಜ ವೀಕ್ಷಣೆ

0

ಕಲ್ಮಂಜ ಗ್ರಾಮದ ಮಾಗಣೆ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತಾ ಕಾರ್ಯ, ದೇವಸ್ಥಾನಕ್ಕೆ ಸಂಧಿಸುವ ವಿವಿಧ ರಸ್ತೆಗಳ ಕಾಮಗಾರಿಗಳನ್ನು ಹಾಗೂ ದೇವಸ್ಥಾನಕ್ಕೆ ಸಂಬಂಧಿಸಿದ ಕಾಮಗಾರಿಗಳ ವೀಕ್ಷಣೆ ಹಾಗೂ ಬ್ರಹ್ಮಕಲಶೋತ್ಸವದ ಸಿದ್ಧತೆಗೆ ಸಂಬಂಧಿಸಿದಂತೆ ವೀಕ್ಷಣೆ ನಡೆಸಿ ಸಲಹೆ ಸೂಚನೆಗಳನ್ನು ಶಾಸಕ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಪೂಂಜ ಜ.20 ರಂದು ಭೇಟಿ ನೀಡಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ತುಕಾರಾಮ ಸಾಲಿಯಾನ್, ಕಾರ್ಯದರ್ಶಿ ಮಂಜುನಾಥ್ ಶೆಟ್ಟಿ, ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಸ್ವಯಂಸೇವಕರು ಹಾಜರಿದ್ದರು.

LEAVE A REPLY

Please enter your comment!
Please enter your name here