ವೇಣೂರು: ‘ವಿಜಯ ಸಂಕಲ್ಪ ಅಭಿಯಾನ’ಕ್ಕೆ ಬಜಿರೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚಾಲನೆ

0

ವೇಣೂರು:ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವಿಜಯ ಸಂಕಲ್ಪ ಅಭಿಯಾನಕ್ಕೆ ನಾರಾವಿ ಮಹಾಶಕ್ತಿ ಕೇಂದ್ರದ ಬಜಿರೆಯಲ್ಲಿ ಚಾಲನೆ ನೀಡಲಾಯಿತು.

ಶಾಸಕ ಹರೀಶ್ ಪೂಂಜರವರು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಅರುಣ್ ಕ್ರಾಸ್ತಾರವರ ಮನೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ‌ ಅಧ್ಯಕ್ಷ ಜಯಂತ್ ಕೋಟ್ಯಾನ್ ವಹಿಸಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ, ವೇಣೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ ಬಿಇ, ವೇಣೂರು ಗ್ರಾ.ಪಂ ಅಧ್ಯಕ್ಷ ನೇಮಯ್ಯ ಕುಲಾಲ್, ಆರಂಬೋಡಿ ಗ್ರಾ.ಪಂ ಅಧ್ಯಕ್ಷೆ ವಿಜಯ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವೂರು, ಶಕ್ತಿಕೇಂದ್ರದ ಕಾರ್ಯದರ್ಶಿ ನಿತೀಶ್ ಗುಂಡೂರಿ, ಬಜಿರೆ ಶಕ್ತಿ ಕೇಂದ್ರದ ಅಧ್ಯಕ್ಷ ಲೋಕಯ್ಯ ಪೂಜಾರಿ ಹಾಗೂ ಪಂ.ಸದಸ್ಯರು, ಶಕ್ತಿ ಕೇಂದ್ರದ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here