Site icon Suddi Belthangady

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಿರತರಾಗಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಪೊಲೀಸರು ಬಂಧಿಸಿ, ತಡರಾತ್ರಿ ಬಿಡುಗಡೆ

ಬೆಳ್ತಂಗಡಿ : ಅಂಗನವಾಡಿ ಕಾರ್ಯಕರ್ತೆಯರಿಗೆ ಶಿಕ್ಷಕರ ಸ್ಥಾನಮಾನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಜ.20 ರಂದು ಪೊಲೀಸರು ಬಂಧಿಸಿ, ತಡರಾತ್ರಿ ಸುಮಾರು 1.00 ಗಂಟೆಗೆ ಬಿಡುಗಡೆಗೊಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನಿಂದ ಸುಮಾರು 50ಕ್ಕೂ ಮಿಕ್ಕಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ. ಈ ಹೋರಾಟವು 4ನೇ ದಿನವು ಮುಂದುವರಿದೆ.

Exit mobile version