Site icon Suddi Belthangady

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಅಮ್ಮನವರ ಜಾತ್ರಾ ಮಹೋತ್ಸವ ಸಂಪನ್ನ,

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂಪನ್ನಗೊಂಡಿತ್ತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ವೇದಿಕೆಯಲ್ಲಿ ಪತ್ರಕರ್ತ ಶ್ರೀಕಾಂತ ಶೆಟ್ಟಿ, ಧಾರ್ಮಿಕ ಪರಿಷತ್‌ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಸೌಮ್ಯ ಉಪಸ್ಥಿತರಿದ್ದರು.

ಸುಲ್ಕೇರಿ ಕುತ್ಯಾರು ಬರ್ಕೆ ಮನೆಯ ಗುರಿಕಾರ ಮಾಂಕು ಪೂಜಾರಿ ಅವರನ್ನು ಹಾಗೂ ಡಿಜಿಟಲ್‌ ಲೈಟ್ಸ್‌ನಲ್ಲಿ ಸತ್ಯದೇವತೆಯ ಚಿತ್ರ ಮೂಡಿಸಿದ ಪಿಲ್ಯದ ನಾರಾಯಣ ಗೊಲ್ಲ ಅವರನ್ನು ಸ್ವಾಮೀಜಿಯವರು ಸನ್ಮಾನಿಸಿದರು.

ಸತ್ಯದೇವತೆ ದೈವಸ್ಥಾನದ ಆಡಳಿತೆದಾರ ಶಿವಪ್ರಸಾದ ಅಜಿಲ ಸ್ವಾಗತಿಸಿದರು. ವಿಜಯಕುಮಾರ್‌ ನಾವರ ವಂದಿಸಿದರು. ನಿತ್ಯಾನಂದ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರ್ವಹಿಸಿದರು.

ಈಚೆಗೆ ನಿಧನರಾದ ಯೋಗಿಶ್‌ ರಾವ್‌ ದೋರಿಂಜೆ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

Exit mobile version