Site icon Suddi Belthangady

ಬೆಳ್ತಂಗಡಿ : ಹೊಟೇಲಿನ ಅಡುಗೆ ಕೋಣೆಯಲ್ಲಿ ನೌಕರ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ಹೊಟೇಲ್ ಶ್ರೀ ಲಕ್ಷ್ಮೀ ಎಂಬ ಹೆಸರಿನ ಹೊಟೇಲಿನಲ್ಲಿ ಕೆಲಸ ಮಾಡುವ ಕಾರ್ಮಿಕ ಹೊಟೇಲಿನ ಅಡುಗೆ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 22ರಂದು ನಡೆದಿದೆ.

ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ನಿವಾಸಿ ಜನಾರ್ಧನ್ ಶೆಟ್ಟಿಗಾರ್ (48ವ.) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಇವರು ಹೊಟೇಲ್ ಮಾಲಕ ಜಗನ್ನಾಥ್ ಹೊಟೇಲ್ ನಲ್ಲಿ ರೂಂ ನಲ್ಲಿ ವಾಸವಾಗುತ್ತಿದ್ದು ಎರಡು ವಾರಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದರು. ನಿನ್ನೆ ಭಾನುವಾರವಾಗಿದ್ದ ಕಾರಣ ಹೊಟೇಲ್ ಗೆ ರಜೆ ಇದ್ದು ಅಲ್ಲಿಯೇ ಉಳಿದುಕೊಂಡಿದ್ದರು. ಸಂಜೆ ವೇಳೆ ಮಾಲೀಕರು ಜನಾರ್ಧನ್ ಶೆಟ್ಟಿಗಾರ್ ಗೆ ಕರೆ ಮಾಡಿ ಸೋಮವಾರಕ್ಕೆ ಬೇಕಾಗುವ ಅಡುಗೆ ಸಾಮಾನು ತಂದಿಡಲು ಹೇಳಿದ್ದರು. ಅದರಂತೆ ಸಾಮಾನು ತಂದು ನಂತರ ಏಕಾಏಕಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ. iವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Exit mobile version