ಶ್ರೀ ವನದುರ್ಗಾ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಗ್ರಾಮಸ್ಥರಿಂದ ಹೊರೆಕಾಣಿಕೆ

0

ಉಜಿರೆ: ಉಜಿರೆ ಗ್ರಾಮದ ಕಲ್ಲೆ ಅಜಿತ ನಗರದಲ್ಲಿ ಶ್ರೀ ನಾಗಬ್ರಹ್ಮ, ಶ್ರೀ ವನದುರ್ಗಾ ಹಾಗೂ ಶ್ರೀ ರಕ್ತೇಶ್ವರಿ, ಮಹಿಸಂದಾಯ, ಕಲ್ಲುರ್ಟಿ, ಪಂಜುರ್ಲಿ, ಗುಳಿಗ ದೈವಗಳ ಸಾನಿಧ್ಯದಲ್ಲಿ ಶ್ರೀ ವನದುರ್ಗಾ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ರಕ್ತೇಶ್ವರಿ ಸಹ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶೋತ್ಸವ ಮತ್ತು ನರ್ತನ ಸೇವೆಯು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಾ. ಹೇಮಾವತಿ ವೀ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಡಿ. ಹರ್ಷೇಂದ್ರ ಕುಮಾರ್ ರವರ ಸಹಕಾರ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ ರವರ ಮಾರ್ಗದರ್ಶನದಲ್ಲಿ, ಪ್ರಧಾನ ಅರ್ಚಕ ವೇ| ಮೂ| ರಾಜಗೋಪಾಲ ಯಡಪಡಿತ್ತಾಯ, ಊರ ಹಾಗೂ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಜ.24 ರಿಂದ ಪ್ರಾರಂಭಗೊಂಡು ಜ.27 ರವರೆಗೆ ನಡೆಯಲಿದೆ.

ಜ.25 ರಂದು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಗ್ರಾಮಸ್ಥ ರಿಂದ ಹೊರೆಕಾಣಿಕೆ ಸಮರ್ಪಣೆಯು ವಿಜ್ರಂಭಣೆಯಿಂದ ಜರುಗಿತು. ಬೆಳಿಗ್ಗೆ ಬಿಂಬ ಶುದ್ಧಿ, ನವಗ್ರಹ ಹೋಮ, ವನದುರ್ಗಾ ಹೋಮ, ನಾಗದೇವರಿಗೆ ಶುದ್ಧಕಲಶ, ತಂಬಿಲ, ಮಂಡಲ ರಚನೆ ನಡೆಯಿತು.

ಈ ಸಂದರ್ಭದಲ್ಲಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮೋಹನ್ ಶೆಟ್ಟಿಗಾರ್, ರಾಜೇಶ್ ಪೈ, ಭಾಸ್ಕರ್ ಧರ್ಮಸ್ಥಳ, ರಾಮಚಂದ್ರ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಶಶಿಧರ್ ಎಂ., ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ, ಕಾರ್ಯಾದರ್ಶಿ ಲಕ್ಷ್ಮಣ್ ಗೌಡ, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಕಲ್ಮಂಜ ಗ್ರಾ. ಪಂ. ಅಧ್ಯಕ್ಷ ಶ್ರೀಧರ್, ಪ್ರಕಾಶ್, ಲಕ್ಷ್ಮಣ್ ಸಪಲ್ಯ, ಪದ್ಮನಾಭ್ ಶೆಟ್ಟಿಗಾರ್, ರವಿ ಚಕ್ಕಿತಾಯ, ಉದಯಚಂದ್ರ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ, ವೆಂಕಟೇಶ್ ಶೆಟ್ಟಿ, ನಾಗರಾಜ್, ಭರತ್ ಕುಮಾರ್ , ಪ್ರಶಾಂತ್ ಜೈನ್, ಪಾಂಡುರಂಗ ಬಾಳಿಗ, ಸಂಪತ್ ರತ್ನ, ಕೇಶವ ಭಟ್ ಅತ್ತಾಜೆ ಮೊದಲಾದವರು ಉಪಸ್ಥಿತರಿದ್ದರು.

ಸಂಜೆ ಬಿಂಬಾಧಿವಾಸ, ಕಲಶಾಧಿವಾಸಗಳು, ಅಧಿವಾಸಗಳ ಹೋಮಗಳು ನಡೆಯಲಿದೆ.

LEAVE A REPLY

Please enter your comment!
Please enter your name here