ಜಿಲ್ಲಾಮಟ್ಟದ ಯುವಜನ ಮೇಳ ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜರಿಗೆ ಹಲವು ಪ್ರಶಸ್ತಿ

0

ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಸುಳ್ಯ ನಗರ ಪಂಚಾಯತ್, ದ.ಕ. ಜಿಲ್ಲಾ ಯುವಜನ ಒಕ್ಕೂಟ ಇವರ ಆಶ್ರಯದಲ್ಲಿ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇವರ ಆತಿಥ್ಯದಲ್ಲಿ ಸುಳ್ಯದ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ರಂಗಮಂದಿರದಲ್ಲಿ ಎರಡು ದಿನಗಳ ಜಿಲ್ಲಾ ಯುವಜನ ಮೇಳ ಜನವರಿ 21-22 ರಂದು ನಡೆಯಿತು.
ಶ್ರೀ ಗುರುಮಿತ್ರ ಸಮೂಹ ಬೆಳ್ತಂಗಡಿ ತಂಡದಿಂದ ವೈಯಕ್ತಿಕ ಲಾವಣಿ ಸ್ಪರ್ಧೆಯಲ್ಲಿ ಭಾಗವಹಿಸಿದ ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜ ಲಾವಣಿಯಲ್ಲಿ ದ್ವಿತೀಯ, ಭಜನೆ, ಗೀಗೀಪದದಲ್ಲಿ ದ್ವಿತೀಯ ಹಾಗೂ ಕೋಲಾಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಹಲವು ವರ್ಷಗಳಿಂದ ಯುವಜನ‌‌ ಮೇಳದಲ್ಲಿ ಭಾಗವಹಿಸುತ್ತಿರುವ ಇವರು ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here