ಸೌತಡ್ಕ ಕ್ಷೇತ್ರದಲ್ಲಿ ಗಣಹೋಮ ಹಾಗೂ ಮೂಡಪ್ಪ ಸೇವೆ

0

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ ಕಾರ್ಯಕ್ರಮ ಜ. 25 ರಂದು ಜರಗಿತು.

ಋತ್ವಿಜರ ಸಹಕಾರದಲ್ಲಿ ನಡೆದ 108 ಕಾಯಿ ಗಣಹೋಮದ ಪೂರ್ಣಾಹುತಿ ಮಧ್ಯಾಹ್ನ ನಡೆಯಿತು.
ಬೆಳಿಗ್ಗೆ ವಾಮನ ನಾಯಕ್ ಉಪ್ಪಿನಂಗಡಿ ಅವರ ನೇತೃತ್ವದಲ್ಲಿ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಸೇವೆ, ಭಕ್ತಿ ರಸಮಂಜರಿ, ವಿದ್ಯಾರ್ಥಿಗಳಿಂದ ಚಿಣ್ಣರ ಚಿಲಿಪಿಲಿ ಇನ್ನಿತರ ಕಾರ್ಯಕ್ರಮಗಳು ನಡೆದವು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್, ಕಾರ್ಯನಿರ್ವಹಣಾಧಿಕಾರಿ ದಯಾನಂದ ಹೆಗ್ಡೆ, ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here