Site icon Suddi Belthangady

ಜಯಾನಂದ ಪಿಲಿಕಲರಿಗೆ ಅವಮಾನ ವಿರೋಧಿಸಿ ಜ.30ರಂದು ಪ್ರತಿಭಟನೆ

ಬೆಳ್ತಂಗಡಿ: ಶ್ರೀ ಭೈರವಿ ಮೂಜಿಲ್ನಾಯ ಪುರುಷರಾಯ ದೈವಗಳ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ ಅವರಿಗೆ ಶಾಸಕರು ಅವಮಾನಿಸಿರುವುದನ್ನು ವಿರೋಧಿಸಿ ಜ.30ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಂಚಾಲ ಶೇಖರ್ ಲಾಯಿಲ ಹೇಳಿದರು.

ಅವರು ಜ.25ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಅಂದು ಬೆಳಿಗ್ಗೆ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಮೆರವಣಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯವರೆಗೆ ಬಂದು ಠಾಣೆಯ ಎದುರು ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ಸುಮಾರು ಐನೂರು ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಾಗರಾಜ ಲಾಯಿಲ ಉಪಸ್ಥಿತರಿದ್ದರು.

Exit mobile version