ಪಡಂಗಡಿ: 74ನೇ ಗಣರಾಜ್ಯೋತ್ಸವ ಆಚರಣೆ; ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

0

ಪಡಂಗಡಿ ಗ್ರಾಮ ಪಂಚಾಯತ್ ಸಮೀಪದ ಅಮೃತ್ ಸರೋವರದ ಅರ್ಬಿ ಕೆರೆಯ ದಡದಲ್ಲಿ 74ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣ ಕಾರ್ಯಕ್ರಮವನ್ನು ಪಡಂಗಡಿ ಗ್ರಾ.ಪಂ ಅಧ್ಯಕ್ಷರಾದ ಮೀನಾಕ್ಷಿ ಶೆಟ್ಟಿ ನೆರವೇರಿಸಿದರು.

ಈ ಸಂದರ್ಭ ಗಣರಾಜ್ಯೋತ್ಸವದ ಅಂಗವಾಗಿ ಜಲಸಂರಕ್ಷಣೆ ಕುರಿತು ಪಡಂಗಡಿ ಸರಕಾರಿ ಪ್ರೌಢ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂಧರ್ಭ 2021-22ನೇ ಆರ್ಥಿಕ‌ ವರ್ಷದಲ್ಲಿ 100 ದಿನ ಪೂರೈಸಿದ ಕುಟುಂಬದ ಒಬ್ಬ ಸದಸ್ಯರಿಗೆ ಟಿ-ಶರ್ಟ್ ಮತ್ತು ಕ್ಯಾಪ್ ವಿತರಿಸಲಾಯಿತು. ಕಾರ್ಯಕ್ರಮ ದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯವರು, ಗ್ರಾ.ಪಂ ಅಧ್ಯಕ್ಷರು ,ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು, ಪಂಚಾಯತ್ ಸಿಬ್ಬಂದಿಗಳು, ತಾಲೂಕು ಐಇಸಿ ಸಂಯೋಜಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here