ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ

0

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಎಡಮನೆ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ, ಶ್ರೀ ವೈದ್ಯನಾಥೇಶ್ವರ ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಜ.27 ರಂದು ಜರುಗಿತು. ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಯವರು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು.

ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿ ಧಾರ್ಮಿಕ ಪ್ರಚವನ ನೀಡಿದರು. ವಾಸ್ತುಶಿಲ್ಪಿ ಎಸ್.ಎಂ. ಪ್ರಸಾದ ಮುನಿಯಂಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ಜೀವನ ಯೋಗ ಪ್ರತಿಷ್ಠಾನ ಸಂಸ್ಥಾಪಕ ಆಚಾರ್ಯ ಅರುಣ್ ಪ್ರಕಾಶ್, ವಿಷ್ಣುಪ್ರಸಾದ್ ತಂತ್ರಿ ಭಾಗವಹಿಸಿದ್ದರು. ಪವಿತ್ರಪಾಣಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಕೃಷ್ಣ ಯಡಪಡಿತ್ತಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಲಕೃಷ್ಣ ಕೆದಿಲಾಯ, ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.

ಮಧುರ ಪ್ರಾರ್ಥಿಸಿದರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಲಕೃಷ್ಣ ಕೆದಿಲಾಯ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಹರಿಪ್ರಸಾದ್ ಕೆದಿಲಾಯ ಕಾರ್ಯಕ್ರಮ ನಿರೂಪಿಸಿದರು. ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ವಂದಿಸಿದರು.

LEAVE A REPLY

Please enter your comment!
Please enter your name here