Site icon Suddi Belthangady

ಉಜಿರೆ: ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜಾತ್ರೋತ್ಸವ

ಉಜಿರೆ: ಇಲ್ಲಿಯ ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನಾಚರಣೆ ಮತ್ತು ವಾರ್ಷಿಕ ಜಾತ್ರೋತ್ಸವ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.26 ಮತ್ತು 27 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಜ.26 ರಂದು ಬೆಳಿಗ್ಗೆ ಪ್ರಾರ್ಥನೆ, ತೋರಣ ಮುಹೂರ್ತ, ಗಣಪತಿ ಹೋಮ, ಕಳಶಾಭಿಷೇಕ, ಮಹಾಪೂಜೆ ನಡೆಯಿತು. ಶಾಸ್ತ್ರಿಯ ದ್ವಂದ್ವ ಕೊಳಲು ವಾದನ, ಸಂಜೆ ಭಜನೆ, ಭಕ್ತಿ ಸಂಗೀತ, ಬಳಿಕ ದೇವರ ಬಲಿ ಹೊರಟು ಭೂತ ಬಲಿ, ಕಟ್ಟೆ ಪೂಜೆ, ವಸಂತ ಕಟ್ಟೆ ಪೂಜೆ, ನಡೆಯಿತು.

ಜ.27 ರಂದು ಬೆಳಿಗ್ಗೆ ಗಣಹೋಮ, ದೇವರ ಬಲಿ, ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾ ಪೂಜೆ ಅನ್ನಸಂತರ್ಪಣೆ ನಡೆಯಿತು. ಸಂಜೆ ದೇವಸ್ಥಾನದಿಂದ ದೈವದ ಭಂಡಾರದ ಮೆರವಣಿಗೆ ರಾತ್ರಿ ರಂಗಪೂಜೆ, ಮಹಾಪೂಜೆ,ನಂತರ ದೈವಗಳ ನೇಮೋತ್ಸವ ಜರಗಿತು. ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರರು, ಅರ್ಚಕರು, ಉತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಪದಾಧಿಕಾರಿಗಳು ಸದಸ್ಯರು, ಭಕ್ತರು ಭಾಗವಹಿಸಿ ಸಹಕರಿಸಿದರು

Exit mobile version