ಬೆಂಗಳೂರಿನಲ್ಲಿ ಕೊಲೆಯಾದ ಗೋವಿಂದ ರಾಜು ಶವ ಚಾಮಾ೯ಡಿ‌ ಘಾಟಿಯಲ್ಲಿ ಪತ್ತೆ

0

ಚಾರ್ಮಾಡಿ,: ಬೆಂಗಳೂರಿನಲ್ಲಿ ಯುವತಿಯನ್ನು ಪ್ರೀತಿಸಿದ ಯುವಕನನ್ನು ಹತ್ಯೆಗೈದ ಆರೋಪದ ಪ್ರಕರಣದಲ್ಲಿ ಕೊಲೆಯಾದ ಗೋವಿಂದರಾಜು ಎಂಬಾತನ ಮೃತ ದೇಹ ಚಾರ್ಮಾಡಿ ಘಾಟಿಯಲ್ಲಿ ಫೆ.1ರಂದು ಪತ್ತೆಯಾಗಿದೆ.

ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತಿಸಿದ್ದ. ಇದನ್ನು ಸಹಿಸದ ಕುಟುಂಬದ ಅನಿಲ್ ಕುಮಾರ್,ಭರತ್ ಮತ್ತಿತರ ಇಬ್ಬರು ಆರೋಪಿಗಳು ಕಳೆದ ಸೋಮವಾರ ಮತ್ತಿಕೆರೆಯಿಂದ ಗೋವಿಂದರಾಜನನ್ನು ಅಪಹರಿಸಿ ರಾಜ್ ಗೋಪಾಲ್ ನಗರದ ಅಂದರಳ್ಳಿಯಲ್ಲಿ ಕೊಲೆ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಮಲಯಮಾರುತದ ಬಳಿ ವಾಹನದಲ್ಲಿ ದೇಹ ತಂದು ಬಿಸಾಕಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.


ಕುಟುಂಬದವರು ಗೋವಿಂದರಾಜು ಕಾಣೆಯಾಗಿರುವ ಬಗ್ಗೆ ಯಶವಂತಪುರ ಠಾಣೆಗೆ ದೂರು ನೀಡಿದ್ದರು. ಕುಟುಂಬದವರಿಗೆ ಅನಿಲ್ ಕುಮಾರ್ ಮೇಲೆ ಅನುಮಾನವಿದ್ದರಿಂದ ಪೊಲೀಸರು ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಭರತ್ ಮತ್ತಿತರ ಇಬ್ಬರು ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದು ಫೆ.1ರಂದು ಆರೋಪಿಗಳನ್ನು ಚಾರ್ಮಾಡಿ ಘಾಟಿಗೆ ಕರೆ ತಂದು ಯಶವಂತಪುರ ಠಾಣೆಯ ಸಬ್ ಇನ್ ಸ್ಪೆಕ್ಟರ್ ಮಹೇಶ್ ಅವರ ತಂಡ ಸ್ಥಳೀಯ ಸಮಾಜ ಸೇವಕರ ಜತೆ ಸೇರಿ ಮೃತದೇಹವನ್ನು ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here