Site icon Suddi Belthangady

ಕಳಿಯ:ಕೊಜಪ್ಪಾಡಿ ಶ್ರೀ ವಾಸುಕೀ ನಾಗಬ್ರಹ್ಮ ದೇವರ ಪುನಃ ಪ್ರತಿಷ್ಠೆ ಬ್ರಹ್ಮಕಲಶೋತ್ಸವ, ಚಪ್ಪರ ಮೂಹೂರ್ತ

ಕಳಿಯ: ಶ್ರೀ ನಾಗಬ್ರಹ್ಮ ಸೇವಾ ಸನ್ನಿಧಿ ಶೇಷಗಿರಿ ಕೊಜಪ್ಪಾಡಿ ಶ್ರೀ ವಾಸುಕೀ ನಾಗಬ್ರಹ್ಮ ದೇವರ ಪುನಃ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಮತ್ತು ನಾಗದರ್ಶನ ಫೆ 9-10 ರಂದು ನಡೆಯಲಿದ್ದು ಮೊದಲ ಅಂಗವಾಗಿ ಚಪ್ಪರ ಮುಹೂರ್ತ ಫೆ1 ರಂದು ನಡೆಯಿತು.

ಪ್ರಗತಿಪರ ಕೃಷಿಕ ಮನೋಜ್ ಕುಮಾರ್ ನೆಕ್ಕಿಲೊಟ್ಟು ಚಪ್ಪರ ಮುಹೂರ್ತ ನೇರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಶ್ರೀನಾಗಬ್ರಹ್ಮ ಸೇವಾ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ ಐಸಿರಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಚಪ್ಪರ ಸಮಿತಿ ಸಂಚಾಲಕರಾದ ಹರೀಶ್ ಶೆಟ್ಟಿ ಅರ್ಮಾನಿ, ಶಂಕರ್ ಗಾಣಿಗ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version