ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಧುಮೇಹ ತಪಾಸಣಾ ಕಾರ್ಯಾಗಾರ

0

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ನಿಂದ ರಕ್ತದ ಒತ್ತಡ ಹಾಗೂ ಮಧುಮೇಹ ರೋಗ ತಪಾಸಣಾ ಕಾರ್ಯಗಾರವು ನಡೆಯಿತು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಚಿನ್ಮಯ್, ಡಾ. ಪ್ರತ್ವಿಷಾ, ದಾದಿಯಾದ ಶ್ರೀಮತಿ ಸಂಗೀತ, ಸುಮಂತ್ ರವರಿಂದ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳಿಗೆ ಮಧುಮೇಹ ತಪಾಸಣೆ ಹಾಗೂ ಬಿ.ಪಿ. ತಪಾಸಣೆಯ ಬಗ್ಗೆ ಪ್ರಾಯೋಗಿಕ ಕಾರ್ಯಗಾರವು ನಡೆಯಿತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ. ಆರ್. ಉಪಸ್ಥಿತರಿದ್ದರು. ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಆಯೋಜಿಸಿ, ರೆಡ್ ಕ್ರಾಸ್ ವಿದ್ಯಾರ್ಥಿನಿ ಕುಮಾರಿ ಚಾರಿತ್ಯ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here