ಕಾಶಿಪಟ್ಣ : ಶ್ರೀ ಆದಿಶಕ್ತಿ ಮಹಾಮ್ಮಾಯಿ ದೇವಸ್ಥಾನದ ಮೇಲ್ಛಾವಣಿಗೆ ರೂ.5 ಲಕ್ಷ ಅನುದಾನ ಬಿಡುಗಡೆ

0

ಕಾಶಿಪಟ್ಣ : ಶ್ರೀ ಆದಿಶಕ್ತಿ ಮಹಾಮ್ಮಾಯಿ ಅಮ್ಮನವರ ದೇವಸ್ಥಾನ ಬಡಕೋಡಿ ಕಾಶಿಪಟ್ಣ ಇದರ ಗರ್ಭಗುಡಿಯ ಹಿಂಭಾಗದ ಮೇಲ್ಛಾವಣಿಗೆ ಐದು ಲಕ್ಷ ರೂಪಾಯಿಗಳ ಅನುದಾನವನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರ ಅನುದಾನದಿಂದ ಬಿಡುಗಡೆಗೊಂಡಿದೆ.

ದೇವಸ್ಥಾನದ ಆಡಳಿತ ಮಂಡಳಿಯ ಮನವಿಗೆ ಸ್ಪಂದಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ , ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಅವರು ಅನುದಾನ ಬಿಡುಗಡೆಗೊಳಿಸಲು ಸಹಕರಿಸಿದ್ದಾರೆ. ಇವರನ್ನು ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರವರ ಪರವಾಗಿ ಸನ್ಮಾನಿಸಲಾಯಿತು‌.

ಈ ಸಂದರ್ಭದಲ್ಲಿ ಪೆರಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ , ಪೆರಾಡಿ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಪ್ರವೀಣ್ ಪಿಂಟೋ , ಕಾಶಿಪಟ್ಣ ಗ್ರಾಮ ಪಂಚಾಯತ್ ಸದಸ್ಯರಾದ ಸುಶೀಲಾ ನಾಯ್ಕ , ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಸತೀಶ್ ನಾಯ್ಕ , ದೇವಸ್ಥಾನದ ಪಾತ್ರಿ ಗಂಗಾಧರ ನಾಯ್ಕ, ಶ್ರೀಪತಿ ಉಪಾಧ್ಯಾಯರು , ದೇವಸ್ಥಾನ ಸಮಿತಿ ಸದಸ್ಯರಾದ ರವಿನಾಯ್ಕ ಹಾಗೂ ಆಡಳಿತ ಸಮಿತಿಯ ಎಲ್ಲಾ ಪದಾಧಿಕಾರಿ ಮತ್ತು ಸದಸ್ಯರು ಮತ್ತು ಊರಿನ ಎಲ್ಲಾ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here