Site icon Suddi Belthangady

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವ

ಅಳದಂಗಡಿ: ಶ್ರೀ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವದ 2 ನೇ ದಿನದ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಅಜಿಲರು ವಹಿಸಿದ್ದರು.

ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಶಂಕರ್ ರಾವ್, ಅಳದಂಗಡಿ ಗ್ರಾ.ಪಂ ಅಧ್ಯಕ್ಷ ಸೌಮ್ಯ ಹರಿಪ್ರಸಾದ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು , ಪ್ರ.ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ವಿಶೇಷ ಕೊಡುಗೆ ನೀಡಿದ ರವಿಕೋಟ್ಯಾನ್, ದೇವದಾಸ್ ಅವರನ್ನು ಸನ್ಮಾನಿಸಲಾಯಿತು. ಮನಿಷಾ ಅಳದಂಗಡಿ ನೂಲಿನಲ್ಲಿ ಗಣಪತಿ ರಚಿಸಿ ಅದನ್ನು ಸ್ವಾಮೀಜಿ ಬಿಡುಗಡೆಗೊಳಿಸಿದರು.

ದೇವದಾಸ್ ಅಳದಂಗಡಿ ಸ್ವಾಗತಿಸಿ, ಪಿ.ಹೆಚ್ ನಿತ್ಯಾನಂದ ಶೆಟ್ಟಿ ನಿರೂಪಿಸಿ, ರಾಜೀತ್ ರೈ ವಂದಿಸಿದರು.

Exit mobile version