ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ಅಭಿನಂದನಾ ಸಭೆ

0

ಕಲ್ಮ0ಜ : ಕಲ್ಮ0ಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಯಶಸ್ವಿಗಾಗಿ ದುಡಿದ ಸಮಿತಿಯ ಸದಸ್ಯರಿಗೆ, ಸ್ವಯಂ ಸೇವಕರಿಗೆ ಅಭಿನಂದನಾ ಸಭೆ ಫೆ.8 ರಂದು ದೇವಸ್ಥಾನದ ವಠಾರದಲ್ಲಿ ಶಾಸಕ ಹಾಗು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಪೂಂಜರ ನೇತೃತ್ವದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ತುಕಾರಾಮ ಸಾಲಿಯಾನ್ ಅರ್ಲ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಶೆಟ್ಟಿ, ಕೋಶಾಧಿಕಾರಿ ಪಾಂಡುರಂಗ ಕಾಕತಕರ್, ಉಪಾಧ್ಯಕ್ಷ ರವಿ ಕುಮಾರ್ ಭಟ್, ಮಹಿಳಾ ಸಮಿತಿ ಸಂಚಾಲಕಿ ಚಿತ್ರಾ ಭೀಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಮಿತಿಯ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ವಿವಿಧ ಉಪ ಸಮಿತಿಗಳ ಸಂಚಾಲಕರುಗಳು, ಸದಸ್ಯರು, ಭಕ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here