Site icon Suddi Belthangady

ಅಳದಂಗಡಿ: ಶ್ರೀ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವ: ದೇವರಿಗೆ 501 ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ

ಅಳದಂಗಡಿ: ಶ್ರೀ ಮಹಾಗಣಪತಿ ದೇವರಿಗೆ 501 ಕಲಶಾಭಿಷೇಕ, ಬ್ರಹ್ಮಕಶಾಭಿಷೇಕ ನಡೆಯಿತು.
ಬೆಳಿಗ್ಗೆ ಗಣಹೋಮ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು,ಸಂಕಷ್ಟ ಚತುರ್ಥಿ ಅಪ್ಪ ಪಂಚಕಜ್ಜಾಯ ಸೇವೆಗಳು ಜರುಗಿದವು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ.ಶಶಿಧರ ಡೋಂಗ್ರೆ,ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ಪ್ರಧಾನ ಆರ್ಚಕ ಸೋಮನಾಥ ಮಯ್ಯ, ಕೋಶಾಧಿಕಾರಿ ಅನಿಲ್ ಕೊಟ್ಟಾರಿ ಹಾಗೂ ಸಮಿತಿಯ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸೋಮನಾಥ ಬಂಗೇರ ವರ್ಪಾಳೆ ಇವರ ಸೇವಾರ್ಥ ಸಂಜೆ ದೇವರಿಗೆ ಮೂಡಪ್ಪ ಸೇವೆ, ಶ್ರೀ ಮಹಾರಂಗಪೂಜೆ ನಡೆಯಲಿದೆ.

Exit mobile version