Site icon Suddi Belthangady

ಎಸ್‌ಡಿಪಿಐ ಬೆಂಬಲಿತ ಗ್ರಾ.ಪಂ. ವಿಜೇತ ಜನಪ್ರತಿನಿಧಿಗಳ ಸಮಾಲೋಚನ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ವಿಜೇತ ಜನಪ್ರತಿನಿಧಿಗಳ ಸಮಾಲೋಚನ ಸಭೆ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ನೇತೃತ್ವದಲ್ಲಿ ಬೆಳ್ತಂಗಡಿ ಪಕ್ಷದ ಕಛೇರಿಯಲ್ಲಿ ಫೆ.10 ರಂದು ನಡೆಯಿತು.
ಪಂಚಾಯತ್ ಸದಸ್ಯರು ಆಯ್ಕೆಯಾಗಿ ಎರಡು ವರ್ಷ ಪೂರೈಸಿದ್ದು, ತಾಲೂಕಿನ ಎಸ್.ಡಿ.ಪಿ.ಐ ಬೆಂಬಲಿತ 23 ಪಂಚಾಯತ್ ಸದಸ್ಯರ ಸಾಧನ ಕಾರ್ಯಕ್ರಮ ನಡೆಯಲಿದೆ. ಇದು ಫೆಬ್ರವರಿ 10 ರಿಂದ ಫೆಬ್ರವರಿ 20 ರ ವರೆಗೆ ನಡೆಯಲಿದ್ದು, ಸದಸ್ಯರ ಸಾಧನ ಸಮಾರಂಭ ಪ್ರತಿ ವಾರ್ಡ್ ವ್ಯಾಪ್ತಿಯಲ್ಲಿ ನಡೆಯಲಿದೆ. ಸಾಧಕರಿಗೆ ಸನ್ಮಾನ, ಮತ್ತು ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಲಿದೆ ಎಂದು ನವಾಝ್ ಕಟ್ಟೆ ಅವರು ತಿಳಿಸಿದರು. ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಚುನಾವಣೆ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಇವರಿಗೆ ಗ್ರಾಮ ಸಮಿತಿ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು.

 ಈ ಸಂದರ್ಭದಲ್ಲಿ ಎಸ್.ಡಿ.ಪಿಐ ಬೆಳ್ತಂಗಡಿ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ERM ಉಸ್ತುವಾರಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
Exit mobile version