ರಾಷ್ಟ್ರೀಯ ಲೋಕ್ ಅದಾಲತ್ ಬೆಳ್ತಂಗಡಿ ನ್ಯಾಯಾಲಯದಲ್ಲಿ 811 ಪ್ರಕರಣಗಳ ಇತ್ಯಾರ್ಥ

0

ಬೆಳ್ತಂಗಡಿ :ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಫೆ.11 ರಂದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 811 ಪ್ರಕರಣಗಳ ಇತ್ಯಾರ್ಥಗೊಂಡಿತು.ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 250 ಪ್ರಕರಣಗಳು, ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ 105, ಸಂಚಾರಿ ಇ ಚಾನಲ್ ನಲ್ಲಿ 102, ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ 354 ಸೇರಿದಂತೆ ಒಟ್ಟು 811ಪ್ರಕರಣಗಳು ಇತ್ಯಾರ್ಥವಾಯಿತು.

ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ದೇವರಾಜ್ ಎಚ್. ಎಂ. ಮತ್ತು ಸಿವಿಲ್ ನ್ಯಾಯಾಧೀಶರು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಸಂದೇಶ್ ಕೆ. ಇವರ ಮಾರ್ಗದರ್ಶನದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಅಪರಾಧ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಆರ್ಥಿಕ ವಸೂಲಾತಿ ಪ್ರಕರಣ, ಮೋಟಾರು ಅಪಘಾತ ಪರಿಹಾರ ಪ್ರಕರಣ,ಪೊಲೀಸ್ ಇಲಾಖೆಯ ಸಂಚಾರಿ ಇ ಚಾನಲ್ ನ ಪ್ರಕರಣಗಳು,ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನ ಸಂಬಂದಿಸಿದ ಕ್ಲೇಮ್ ಗಳು ಮೊದಲಾದ ಪ್ರಕರಣವನ್ನು ಸ್ಥಳದಲ್ಲಿಯೇ ರಾಜಿಯಾಗುವ ಮೂಲಕ ಇತ್ಯಾರ್ಥ ಮಾಡಲಾಯಿತು.ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಂಡರು. ಈ ಸಂದರ್ಭದಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ. ಎಸ್., ಕಾರ್ಯದರ್ಶಿ ಶೈಲೇಶ್ ಠೋಸರ್, ವಕೀಲರುಗಳು ಕಾನೂನು ಸೇವಾ ಸಮಿತಿ ಸದಸ್ಯರು, ಸಾರ್ವಜನಿಕರು ಹಾಜರಿದ್ದರು. ವಕೀಲರುಗಳಾದ ಶೈಲೇಶ್ ಆರ್.ಠೋಸರ್, ಸ್ವರ್ಣಲತಾ ಎ., ಜೋಸ್ನಾ ವಿ. ಎ., ಸಂಧಾನಕಾರರಾಗಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here