ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಿಶೇಷ ಸಭೆ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

0

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಿಶೇಷ ಸಭೆ ಗುರುವಾಯನಕೆರೆ ಛಾಯಭವನದಲ್ಲಿ ವಲಯದ ಅಧ್ಯಕ ಅಶೋಕ್ ಆಚಾರ್ಯ ಅಧ್ಯಕ್ಷತೆಯಲ್ಲಿ ಜರಗಿತು.

ಸಭೆಯಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲಾಧ್ಯಕ್ಷ ಆನಂದ ಎನ್ ಬಂಟ್ವಾಳ ಜಿಲ್ಲಾ ಕಟ್ಟಡ ರಚನೆ ಬಗ್ಗೆ ಮಾಹಿತಿ ನೀಡಿ ವಿಜ್ಞಾಪನಾ ಪತ್ರ ಬಿಡುಗಡೆ ಮಾಡಿದರು. ಸಭೆಯಲ್ಲಿ ಜಿಲ್ಲಾ ಕೋಶಾಧಿಕಾರಿ ನವಿನ್ ರೈ, ಪುತ್ತೂರು ವಲಯದ ಗೌರವಾಧ್ಯಕ್ಷ ‌ಸುಬ್ರಹ್ಮಣ್ಯ ಕೆ ಜಿ ಮಡಂತ್ಯಾರು, ಉಪಾಧ್ಯಕ್ಷ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ, ಕೋಶಾಧಿಕಾರಿ ಹರೀಶ್ ಕೋಳ್ತಿಗೆ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸಂತ ಶರ್ಮ ಉಜಿರೆ ಉಪಸ್ಥಿತರಿದ್ದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕರ ಸಾಲಿಯಾನ್ ಸುರತ್ಕಲ್, ಜಿಲ್ಲಾ ಜೊತೆ ಕಾರ್ಯದರ್ಶಿ ಅಜೆಯ್ ಮಂಗಳೂರು, ಮಾಜಿ ಕಾರ್ಯದರ್ಶಿ ಹರೀಶ್ ಅಡ್ಯಾರ್ ಆಗಮಿಸಿದ್ದರು. ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರುಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವಲಯದ ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ ಸ್ವಾಗತಿಸಿದರು. ಕೋಶಾಧಿಕಾರಿ ಹರೀಶ್ ಕೋಳ್ತಿಗೆ ಧನ್ಯವಾದವಿತ್ತರು. ವಲಯದ ಮಾಜಿ ಅಧ್ಯಕ್ಷ ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here