ಫೆ.18: ಬಳಂಜದಲ್ಲಿ ಶ್ರೀ ಗುರುಪೂಜೆ, ಸರ್ವೇಶ್ವರೀ ದೇವಿಯ ಪೂಜೆ, ಧಾರ್ಮಿಕ ಸಭೆ

0

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ, ನಾಲ್ಕೂರು ,ತೆಂಕಕಾರಂದೂರು ಇದರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರುಪೂಜೆ, ಶ್ರೀ ಸರ್ವೇಶ್ವರಿ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆಯು ಫೆ18 ರಂದು ನಡೆಯಲಿದೆ.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್. ವಹಿಸಲಿದ್ದಾರೆ.

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪೋಲೀಸ್ ಅಧಿಕಾರಿ ಕುಮಾರ ಚಂದ್ರ, ಬೆಳ್ತಂಗಡಿ ಶ್ರೀ ಗು.ನಾ‌.ಸೇ.ಸಂಘದ ಅಧ್ಯಕ್ಷರು, ಬಿ.ಎಂ.ಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಮಂಗಳೂರು ಮಂಗಳಾದೇವಿ ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಕೋಟ್ಯಾನ್, ಯುವವಾಹಿನಿ ಬೆಳ್ತಂಗಡಿ ಘಟಕಾಧ್ಯಕ್ಷ ಅಶ್ವಥ್ ಕುಮಾರ್, ಯುವವಾಹಿನಿ ವೇಣೂರು ಘಟಕಾಧ್ಯಕ್ಷೆ ಹರಿಣಿ ಕರುಣಾಕರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ತಿಳಿಸಿದ್ದಾರೆ.

ಗೌರವಾರ್ಪಣೆ: ಕಾರ್ಯಕ್ರಮದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಾಧಕ ಚಂದ್ರಹಾಸ ಬಳಂಜ, ರಾಷ್ಟ್ರೀಯ ಕ್ರೀಡಾಪಟು ಕು.ಸುಷ್ಮಾ ಬಿ ಪೂಜಾರಿ, ಕ್ರೀಡಾಪ್ರತಿಭೆ ಕೀರ್ತಿ ಪೂಜಾರಿ, ಮೋಟೋಕ್ರಾಸ್ ಸಾಧಕ ಸಂತೋಷ್ ಕಂಪುಂರ್ಜ ಹಾಗೂ ಪಂಚಶ್ರೀ ಮಹಿಳಾ ಭಜನಾ ತಂಡ ಮತ್ತು ಬ್ರಹ್ಮಶ್ರೀ ಕುಣಿತಾ ಭಜನಾ ತಂಡದ ಸದಸ್ಯರಿಗೆ ಗೌರವಾರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here