ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ, ಸನ್ಮಾನ ಕಾರ್ಯಕ್ರಮ

0

ಬೆಳ್ತಂಗಡಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ -2023 ಕಾರ್ಯಕ್ರಮವು ಫೆ.11 ಮತ್ತು 12 ರಂದು ಎ.ಎಲ್.ಎನ್ ರಾವ್ ಕ್ರೀಡಾಂಗಣ ಎಂ.ಜಿ.ಎಂ ಕುಂಜಿಬೆಟ್ಟು, ಉಡುಪಿ ಇಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಉಡುಪಿ ಶಾಸಕ ಕೆ ರಘುಪತಿ ವಹಿಸಿದ್ದರು. ಉಡುಪಿ ಸೋದೆ ಮಠ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀ ಪಾದರು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಸಮ್ಮೇಳನದ ಅಧ್ಯಕ್ಷರಾದ ಡಾ| ಎಂ. ಪ್ರಭಾಕರ್ ಜೋಶಿ, ನಿ .ಬಿ .ವಿಜಯ ಬಲ್ಲಾಳ್, ಧರ್ಮದರ್ಶಿ ಅಂಬಲ ಪಾಡಿ ದೇವಸ್ಥಾನ, ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ಜಿ .ಯಲ್. ಹೆಗಡೆ ಕುಮಟಾ,ಅಕಾಡೆಮಿ ರಿಜಿಸ್ಟಾರ್ ಯೆಸ್. ಯೆಚ್.ಶಿವರುದ್ರಪ್ಪ ಮೊದಲಾದವರು ಉಪಸ್ಥಿತರಿದ್ದು ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ವೇಷಧಾರಿ ರಾಜ್ಯ ಪ್ರಶಸ್ತಿ ವಿಜೇತ ಅರುವ ಕೊರಗಪ್ಪ ಶೆಟ್ಟಿ ಹಾಗೂ ಮೇಳದ ಸಹಾಯಕರಾದ ರಘು ಶೆಟ್ಟಿ ನಾಳ, ಕುಶಾಲಪ್ಪ ನಾಯ್ಕ ಬೆಳಾಲು ಇವರನ್ನು ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here