ವಸತಿಯಿಲ್ಲದೆ ಸಮಸ್ಯೆ ಅನುಭವಿಸಿದ ಸಿಬ್ಬಂದಿಗಳಿಗೆ ವಸತಿ ಕಲ್ಪಿಸಿ ಮಾನವೀಯತೆ ಮೆರೆದ ಶಾಸಕ ಪೂಂಜ

0

ಬೆಳ್ತಂಗಡಿ:ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಮ್ಮ ಹಲವು ಬೇಡಿಕೆಗಳ ಈಡೇರಿಕೆ ಬಗ್ಗೆ ಬೆಂಗಳೂರಿನಲ್ಲಿ ಇತ್ತೀಚೆಗೆ ಮುಷ್ಕರ ನಿರತರಾಗಿದ್ದ ವೇಳೆ ವಸತಿ ವ್ಯವಸ್ಥೆ ಇಲ್ಲದೆ ತೊಳಲಾಟ ನಡೆಸುತ್ತಿದ್ದರು.

ಈ ವಿಚಾರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಗಮನಕ್ಕೆ ಬರುತ್ತಿದ್ದಂತೆ ಅವರು ತಕ್ಷಣ ಸ್ಪಂದಿಸಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಸಿಬ್ಬಂದಿಗಳಿಗೆ ರೂಮ್ ಗಳ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟು ಸಹಕರಿಸಿದ್ದಾರೆ ಎಂದು ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಮೋಹನ್ ದೇವಾಡಿಗ ತಿಳಿಸಿದ್ದಾರೆ.

3 ದಿನಗಳ ಮುಷ್ಕರದ ವೇಳೆ ವಸತಿ ವ್ಯವಸ್ಥೆ ಕಲ್ಪಿಸಿದ ಶಾಸಕರಿಗೆ ಮುಷ್ಕರದಲ್ಲಿ ಭಾಗವಹಿಸಿದ ತಾಲೂಕಿನ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here