ಕೊಕ್ಕಡ: ಶಿವ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗಾಗಿ ಶ್ರೀ ಕ್ಷೇ.ಧ. ಗ್ರಾಮಾಭಿವೃದ್ದಿ ಯೋಜನೆಯ ಅಧಿಕಾರಿಗಳು ಭೇಟಿ

0

ಕೊಕ್ಕಡ: ಇಲ್ಲಿಯ ಶಿವ ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಲುವಾಗಿ ಸ್ಥಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಆನಂದ ಸುವರ್ಣ , ಪ್ರಿಮಯಿಸನ್ ಮತ್ತು ಸ್ಟೇಷನರಿ ವಿಭಾಗದ ನಿರ್ದೇಶಕ ಚಂದ್ರಶೇಖರ್ ಕೆ, ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್ ಫೆ. 16 ರಂದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಪಂಚಾಯತ್ ಅಧ್ಯಕ್ಷ ಯೋಗೀಶ್ ಆಳಂಬಿಲ ರವರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಕುರಿತಾಗಿ ಮಾಹಿತಿ ವಿವರಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಚಂದ್ರಶೇಖರ್ ರವರು ವ್ಯವಸ್ಥಿತ ಅಭಿವೃದ್ಧಿ ಮಾಡಲು ಕೆಲವು ಸಲಹೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನಾ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಸದಸ್ಯ ಪ್ರಭಾಕರ್ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here