ಅಮ್ಮನ ಪ್ರಾಣ ಉಳಿಸಲು ನೆರವಾಗಿ ಎಂದು ಬಾಲಕಿಯೊಬ್ಬಳು ಡಿಎಸ್‌ಎಸ್ ಸಂಘಟನೆಗೆ ಮನಕಲಕುವ ಪತ್ರ

0

ಕಣಿಯೂರು : ಹೊಟ್ಟೆಯಲ್ಲಿ ಗಡ್ಡೆ ಕ್ಯಾನ್ಸರ್‌ಗೊಳಗಾಗಿರುವ ನನ್ನ ಅಮ್ಮನ ಚಿಕಿತ್ಸೆಗೆ ಲಕ್ಷಾಂತರ ರೂ ಬೇಕಾಗುತ್ತದೆ. ಅಮ್ಮನ ಪ್ರಾಣ ಉಳಿಸಲು ನೆರವಾಗಿ ಎಂದು ಎಳೆಯ ಪ್ರಾಯದಲ್ಲೇ ತಂದೆಯನ್ನು ಕಳೆದುಕೊಂಡಿರುವ 11 ರ ಹರೆಯದ ಬಾಲಕಿಯೊಬ್ಬಳು ಡಿಎಸ್‌ಎಸ್ ಸಂಘಟನೆಗೆ ಮನಕಲಕುವ ಪತ್ರ ಬರೆದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಕೊರಜಂಡ ಮನೆ ನಿವಾಸಿ‌ ದಿ. ವಾಸಪ್ಪ ಎಂಬವರ ಪುತ್ರಿ ವಿತೀತಾ ಎಂಬವರೇ ಈ ರೀತಿ ಪತ್ರ ಬರೆದು ಸಹಾಯ ಯಾಚಿಸಿರುವ ಬಾಲಕಿ.

ನಾನು ನನ್ನ ತಂದೆಯನ್ನು ಹಲವು ವರ್ಷಗಳ ಹಿಂದೆಯೇ ಮರ. ಮೈ ಮೈಲೆ ಬಿದ್ದು‌ ನಡೆದ ಘಟನೆಯಲ್ಲಿ ಕಳೆದುಕೊಂಡಿದ್ದೇನೆ. ನಾನು ಕಣಿಯೂರು ಶಾಲೆಯಲ್ಲಿ6 ನೇ ತರಗತಿಯಲ್ಲಿ ಓದುತ್ತಿದ್ದರೆ, ನನ್ನ‌ ಸಹೋದರ 2 ನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ. ನನ್ನ ಅಮ್ಮ ಪದ್ಮುಂಜ ಪ್ರೌಢ ಶಾಲೆಯಲ್ಲಿ ಬಿಸಿಯೂಟ ಸಿಬ್ಬಂದಿಯಾಗಿ ದುಡಿದು ನಮ್ಮನ್ನು ಸಾಕುತ್ತಿದ್ದರು.

ಇದ್ದಕ್ಕಿದ್ದಂತೆ ಅವರಿಗೆ ಹೊಟ್ಟೆಯೊಳಗೆ ನೋವು ಕಾಣಿಸಿಕೊಂಡಾಗ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಅದು ಗಡ್ಡೆ ಕ್ಯಾನ್ಸರ್ ಎಂದು ತಿಳಿಯಿತು. ಎಲ್ಲೆಲ್ಲಿಂದಲೂ ಹಣ ಒಟ್ಟುಗೂಡಿಸಿ 3-4. ಲಕ್ಷ ರೂ. ವ್ಯಯಿಸಿ ಚಿಕಿತ್ಸೆ ಮಾಡಲಾಯಿತು. ‌ಇದೀಗ ಮತ್ತೆ ರೋಗ ಉಲ್ಬಣಿಸಿ ಅಮ್ಮ ಹಾಸಿಗೆ ಹಿಡಿದಿದ್ದಾರೆ. ಇದೀಗ ಮತ್ತೆ ಆಪರೇಷನ್ ಆಗಬೇಕೆಂದು ಹೇಳಿದ್ದು ಚಿಕಿತ್ಸೆ ಪಡೆಯಬೇಕಾಗಿದೆ. ಇದಕ್ಕೆ ಇನ್ನೂ 4-5 ಲಕ್ಷ ರೂ. ಬೇಕಿದೆ ಎಂದಿದ್ದಾರೆ‌. ಆದ್ದರಿಂದ ಡಿಎಸ್‌ಎಸ್ ಸಂಘಟನೆ ಮತ್ತು ಸಾರ್ವಜನಿಕರು ನೆರವಾಗಬೇಕು ಎಂದು ಭಿನ್ನವಿಸಿಕೊಂಡಿದ್ದಾಳೆ.
ಸಹಾಯ ಮಾಡಬಯಸುವವರು;

Vinaya

AC No. 1599101010052

IFSC CODE:

CNRB 0001599

CANARA BANK PADMUNJA

PHON; 7760422885

LEAVE A REPLY

Please enter your comment!
Please enter your name here