ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ಶಿವ ಪಂಚಾಕ್ಷರಿ ನಾಮಸ್ಮರಣೆಗೆ ಚಾಲನೆ

0


ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ದೇವರ ಸನ್ನಿಧಿಯಲ್ಲಿ ಶಿವರಾತ್ರಿ ಪ್ರಯುಕ್ತ ಫೆ.18 ರಂದು ಶಿವಪಂಚಾಕ್ಷರಿ ನಾಮಸ್ಮರಣೆಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ನಂದಾ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಹೆಗ್ಗಡೆಯವರು ಪಾದಯಾತ್ರಿ ಗಳನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಮಾಣಿಲ ಶ್ರೀ ಧಾಮದ ಶ್ರೀ ಮೋಹನ್ ದಾಸ್ ಸ್ವಾಮೀಜಿ, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, 44 ವರ್ಷಗಳಿಂದ ಪಾದಯಾತ್ರೆ ಯಲ್ಲಿ ಪಾಲ್ಗೊಳ್ಳುತ್ತಿರುವ ಬೆಂಗಳೂರಿನ ಹನುಮಂತಪ್ಪ, ಎಸ್. ಮರಿಯಪ್ಪ ಉಪಸ್ಥಿತರಿದ್ದರು,

ವೀರಾಂಜನೇಯ ಪಾದಯಾತ್ರೆ ಸಮಿತಿ ವತಿಯಿಂದ ಡಾ. ಹೆಗ್ಗಡೆಯವರನ್ನು ಸನ್ಮಾನಿಸಿದರು.

ಹೆಗ್ಗಡೆಯವರ ಆಪ್ತ ಸಹಾಯಕ ವೀರು ಶೆಟ್ಟಿ, ಪಾರುಪತ್ತೇದಾರ ಲಕ್ಷ್ಮಿ ನಾರಾಯಣ ರಾವ್ ಮತ್ತಿತರರು ಕ್ಷೇತ್ರದ ಸಿಬ್ಬಂದಿಗಳು ಸಹಕರಿಸಿದರು. ಶಿಕ್ಷಕ ಜ್ಞಾನೇಶ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪಾದಯಾತ್ರೆ ಗಳಿಂದ ಭಕ್ತರಿಂದ ಭಜನೆ, ಉತ್ಸವ ನಡೆಯಿತು

LEAVE A REPLY

Please enter your comment!
Please enter your name here