ಶ್ರೀ ಧ.ಮಂ.ಆಂ.ಮಾ.ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿದ್ಯಾರ್ಥಿಗಳಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಸ್ವಯಂ ಸೇವಕರಾಗಿ ಕಾರ್ಯ

0

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ “ಶ್ರೀ ಮಂಜುನಾಥ ” ದಳದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಧಾನದ ಜಾತ್ರಾ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ , ಹಾಗೂ ಇಂಡಿಯನ್ ರೆಡ್ ಕ್ರಾಸ್ ನ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಉಚಿತವಾಗಿ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆಯನ್ನು ಮಾಡಿದರು .

ತಾಲೂಕು ಇಂಡಿಯನ್ ರೆಡ್ ಕ್ರಾಸ್ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದು ಸಂಪೂರ್ಣ ಸಹಕಾರ ನೀಡಿದರು. ಶ್ರೀ ಮಂಜುನಾಥ ಭಜನಾ ತಂಡದ ವಿದ್ಯಾರ್ಥಿಗಳು ಕುಣಿತ ಭಜನೆಯನ್ನು ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು. ಭಾರತ್ ಸ್ಕೌಟ್ ಗೈಡ್ ನ ಕಾರ್ಯದರ್ಶಿ, ಇಂಡಿಯನ್ ಜೂನಿಯರ್ ರೆಡ್ ಕ್ರಾಸ್ ನ ಜೂನಿಯರ್ ಕೌನ್ಸಿಲರ್, ಶ್ರೀ ಮಂಜುನಾಥ ಭಜನಾ ತಂಡದ ಭಜನಾ ಸಂಯೋಜಕರಾದ ಶ್ರೀಮತಿ ಪ್ರಮೀಳಾರವರ ನೇತೃತ್ವದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here