ವೇಣೂರು: ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ: ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠೆ, ಶ್ರೀ ಗಣಪತಿ, ಶ್ರೀ ಸುಬ್ರಹ್ಮಣ್ಯ, ಶ್ರೀ ಜನಾರ್ಧನ ಪ್ರತಿಷ್ಠೆ ಅಷ್ಟಬಂಧ ಪ್ರಕ್ರಿಯೆ, ಜೀವ ಕಲಶಾಭಿಷೇಕ

0

ವೇಣೂರು: ಅಜಿಲ ಸೀಮೆಯ ಪಟ್ಟದ ದೇವರಾದ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠೆಯು ಪೂರ್ವಾಹ್ನ 8.22 ರ ಮೀನ ಲಗ್ನ ಸುಮುರ್ಹೂತದಲ್ಲಿ ಫೆ.24 ರಂದು ನಡೆಯಿತು. ಶ್ರೀ ಗಣಪತಿ,ಶ್ರೀ ಸುಬ್ರಹ್ಮಣ್ಯ, ಶ್ರೀ ಜನಾರ್ಧನ ಪ್ರತಿಷ್ಠೆ ಅಷ್ಟಬಂಧ ಪ್ರಕ್ರಿಯೆ, ಜೀವ ಕಲಶಾಭಿಷೇಕ, ಪ್ರತಿಷ್ಠಾ ಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಎನ್ ಪುರುಷೋತ್ತಮ ರಾವ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಯಜ್ಞ ನಾರಾಯಣ ಭಟ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರುಗಳಾದ ಸುಂದರ ಹೆಗ್ಡೆ, ಜಯರಾಮ್ ಶೆಟ್ಟಿ, ಎಚ್.ಸೋಮಯ್ಯ ಹನೈನಡೆ,ಆನಂದ ಶೆಟ್ಟಿ, ಧರಣೇಂದ್ರ ಕುಮಾರ್ ಸಮಿತಿಯ ಪದಾಧಿಕಾರಿಗಳು, ಊರ ಪರವೂರ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here