ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಉಪನ್ಯಾಸ

0

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಫೆ.23 ರಂದು ನಡೆಯಿತು.

ಮುಕ್ಕ ಮಂಗಳೂರು ಶ್ರೀನಿವಾಸ ಯೂನಿವರ್ಸಿಟಿಯ ಸಂಶೋಧನಾ ಮಾರ್ಗದರ್ಶಕರಾದ ಡಾ. ಸೋಂದಾ ಭಾಸ್ಕರ ಭಟ್ ರಾಷ್ಟ್ರ ನಿರ್ಮಾಣದಲ್ಲಿ ಧರ್ಮದ ಪ್ರಸ್ತುತತೆ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ, ಶಿರ್ಲಾಲು ಗ್ರಾ.ಪಂ‌ ಅಧ್ಯಕ್ಷ ತಾರನಾಥ ಗೌಡ, ಪಡಂಗಡಿ ಗ್ರಾ.ಪಂ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ನಂದಿಬೆಟ್ಟ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯೋಗೀಶ್ ಭಟ್, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯಾಧ್ಯಕ್ಷರುಗಳಾದ ಆನಂದ ಶೆಟ್ಟಿ ಮತ್ತು ಸೋಮಯ್ಯ ಹನೈನಡೆ, ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ವಸಂತ ಮಡಿವಾಳ ಉಪಸ್ಥಿತರಿದ್ದರು.

ವೇಣೂರು ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಸಾಂಸ್ಕೃತಿಕ ಸಮಿತಿ ಸಂಚಾಲಕ ಉಮೇಶ್ ನಡ್ತಿಕಲ್ಲು ಸ್ವಾಗತಿಸಿದರು.

LEAVE A REPLY

Please enter your comment!
Please enter your name here