ಶ್ರೀ.ಧ.ಮಂ. ಆಂ.ಮಾ. ಶಾಲೆಯ ವತಿಯಿಂದ ವಿಶ್ವ ಚಿಂತನಾ ದಿನಾಚರಣೆ

0

ಧರ್ಮಸ್ಥಳ :ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದ ವತಿಯಿಂದ ವಿಶ್ವ ಚಿಂತನಾ ದಿನಾಚರಣೆಯನ್ನು ಸ್ಕೌಟ್ ಗೈಡ್ ಮಕ್ಕಳು, ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆಗೆ ಭೇಟಿ ನೀಡಿ ಮಹತ್ವ ಪೂರ್ಣವಾಗಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ಕೇಂದ್ರದ ವಿಕಲಚೇತನ ಮಕ್ಕಳು ಬೇಡನ್ ಪಾವೆಲ್ ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸುವುದರ ಮೂಲಕ ತಮ್ಮ ಗೌರವವನ್ನು ವ್ಯಕ್ತಪಡಿಸಿದರು. ಸ್ಕೌಟ್ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿ ಮಕ್ಕಳನ್ನು ಮನರಂಜಿಸಿದರು ಹಾಗೂ ಅಲ್ಲಿನ ಮಕ್ಕಳಿಗೆ ಫಲವಸ್ತುಗಳನ್ನು ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಗೈಡ್ ಕ್ಯಾಪ್ಟನ್ ಶ್ರೀಮತಿ ಗೀತಾ ನಿರೂಪಿಸಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರೆ, ಸ್ಕೌಟ್ ಶಿಕ್ಷಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿ, ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಮಲ್ಲಿಕಾ ವಂದಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಕಾರ್ಯಕ್ರಮಕ್ಕೆ ಬೆಂಬಲವಾಗಿ ಮಾರ್ಗದರ್ಶನ ನೀಡಿದ್ದರು ಕಾರ್ಯಕ್ರಮಕ್ಕೆ ಕೇಂದ್ರದ ಸಿಬ್ಬಂದಿ ವರ್ಗದವರು ಸಾಕ್ಷಿಯಾದರು.

LEAVE A REPLY

Please enter your comment!
Please enter your name here