Site icon Suddi Belthangady

ರೋಟರಿ ಕ್ಲಬ್ ನಿಂದ ವಿಜಯ ರಾಘವ ಪಡುವೆಟ್ನಾಯರಿಗೆ ಶ್ರದ್ಧಾಂಜಲಿ

ಉಜಿರೆ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಇತ್ತೀಚೆಗೆ ನಿಧನರಾದ ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ಯು. ವಿಜಯರಾಘವ ಪಡುವೆಟ್ನಾಯರಿಗೆ ಶ್ರದ್ಧಾಂಜಲಿ ಸಭೆ ಫೆ.23 ರಂದು ರೋಟರಿ ಸೇವಾಭವನದಲ್ಲಿ ರೋಟರಿ ಕ್ಲಬ್ ಅಧ್ಯಕ್ಷೆ ರೊ. ಮನೋರಮಾ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.

ಮೃತರ ಗೌರವಾರ್ಥ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಿ ಮೃತರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಲ್ಲಿಸಿ ಗೌರವವನ್ನು ಸಮರ್ಪಿಸಲಾಯಿತು. ಪೂರ್ವಾಧ್ಯಕ್ಷರಾದ ರೊ. ಜಗದೀಶ್ ಪ್ರಸಾದ್ ನುಡಿನಮನ ಸಲ್ಲಿಸಿದರು. ರೋಟರಿ ಕ್ಲಬ್ ನ ಸಹಾಯಕ ಗವರ್ನರ್ ನಿವೃತ್ತ ಮೇಜರ್ ಜನರಲ್ ರೊ. ಎಂ ವಿ ಭಟ್, ನಿಯೋಜಿತ ಅಧ್ಯಕ್ಷ ರೊ. ಅನಂತ ಭಟ್ ಮಚ್ಚಿಮಲೆ, ಕಾರ್ಯದರ್ಶಿ ರೊ. ರಕ್ಷಾ ರಾಗ್ನೀಶ್, ಕ್ಲಬ್ ನ ಪೂರ್ವಾಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Exit mobile version