ಅನಾರೋಗ್ಯದಿಂದ ಬಳಲುತ್ತಿರುವ ದೀಪಿಕಾ ಎಂ ರವರ ಮನೆಗೆ ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ: ಆರ್ಥಿಕ ನೆರವು

0

ನಿಡ್ಲೆ : ಅನಾರೋಗ್ಯದಿಂದ ಬಳಲುತ್ತಿರುವ ನಿಡ್ಲೆ ಗ್ರಾಮದ ದೀಪಿಕಾ ಎಂ ರವರ ನಿವಾಸಕ್ಕೆ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರರವರು ಭೇಟಿ ನೀಡಿ ತನ್ನ ವೈಯಕ್ತಿಕ ಹಾಗೂ ಪಕ್ಷದ ಕಾರ್ಯಕರ್ತರಿಂದ ಒಟ್ಟುಕೂಡಿದ ಆರ್ಥಿಕ ನೆರವಿನ ಮೊತ್ತವನ್ನು ಹಸ್ತಾಂತರಿಸಿದರು.

ಈ ಸಂದರ್ಭ ಕಳೆಂಜ ಕಾಂಗ್ರೆಸ್ಸಿನ ಗ್ರಾಮ ಸಮಿತಿಯ ಅಧ್ಯಕ್ಷ ಪಿ ಟಿ ಸೆಬಾಸ್ಟಿಯನ್, ಗ್ರಾಮೀಣ ಬ್ಲಾಕ್ ಸೇವಾದಾಳ ಅಧ್ಯಕ್ಷರು ಶರತ್, ಪ್ರಧಾನ ಕಾರ್ಯದರ್ಶಿ ಶೇಖರ್ ಗೌಡ, ವಾರ್ಡ್ 1ರ ಕಾರ್ಯದರ್ಶಿ ಶೀತಾರಾಮ ಪೂಜಾರಿ, ವಾರ್ಡ್ ಅಧ್ಯಕ್ಷರು ಕೃಷ್ಣಪ್ಪ ಗೌಡ, ಗ್ರಾಮ ಪಂಚಾಯಿತಿಯ ಸದಸ್ಯ ನಿತ್ಯಾನಂದ ರೈ, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯ ಸೋಮಪ್ಪ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ವಕ್ತಾರರಾದ ಮನೋಹರ್ ಎ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು, ಸಂಜೀವ ದೇವಾಡಿಗ ಶಿಬರಜೆ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here