Site icon Suddi Belthangady

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪಾರ್ಟಿ ಲೀಡರ್ಸ್ ಮೀಟ್

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಜೋಡೋ ಅಭಿಯಾನದ ಅಂಗವಾಗಿ ಪಾರ್ಟಿ ಲೀಡರ್ಸ್ ಮೀಟ್ ಕಾರ್ಯಕ್ರಮವು ಬೆಳ್ತಂಗಡಿ ಪಕ್ಷದ ಕಛೇರಿಯಲ್ಲಿ ಫೆ. 25 ರಂದು ನಡೆಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ದ.ಕ ಜಿಲ್ಲಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ‘ಬೂತ್ ಫಸ್ಟ್ ಪೋಲ್ ನೆಕ್ಸ್ಟ್’ ಅಭಿಯಾನದ ಉದ್ದೇಶ ಮತ್ತು ಪಕ್ಷ ಸಂಘಟಿಸುವ ಬಗ್ಗೆ ತಿಳಿಸಿದರು.

ಕರ್ನಾಟಕ ರಾಜ್ಯ ಪಕ್ಷ ಸಂಘಟನಾ ಕಾರ್ಯದರ್ಶಿ ಮಜೀದ್ ತುಂಬೆ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ನವಾಝ್ ಕಟ್ಟೆ, ಎಸ್‌ಡಿಪಿಐ ಬೆಳ್ತಂಗಡಿ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಮತ್ತು ಬೆಳ್ತಂಗಡಿ ಕ್ಷೇತ್ರದ ಪಕ್ಷದ ನಾಯಕರು ಉಪಸ್ಥಿತರಿದ್ದರು.

Exit mobile version