ಪದ್ಮುಂಜ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

0

ಪದ್ಮುಂಜ : ಇಲ್ಲಿಯ ಕಣಿಯೂರು ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪಾಣೆಕಲ್ಲು ಎಂಬಲ್ಲಿ ನಿರ್ಮಿಸಿದ ನೂತನ ಕಟ್ಟಡದ ಉದ್ಘಾಟನೆಯನ್ನು ಬಂದಾರು ಪಂಚಾಯತ್ ಅಧ್ಯಕ್ಷರು, ಸಂಘದ ಅಧ್ಯಕ್ಷರು, ನಿರ್ದೇಶಕರಿಂದ ಉದ್ಘಾಟನಾ ಸಮಾರಂಭವು ಫೆ.27 ರಂದು ಪಾಣೆಕಲ್ಲು ವಠಾರದಲ್ಲಿ ಜರುಗಿತು.
ಬಂದಾರು ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಗೌಡ ದೀಪ ಪ್ರಜ್ವಲಿಸುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಸಂಘದ ನಿರ್ದೇಶಕ ಉದಯ ಕುಮಾರ್ ಕೆ ಪ್ರಸ್ತಾವನೆ ಭಾಷಣ ಮಾಡಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸಂಘದ ಬೆಳವಣಿಗೆಗೆ ಸದಸ್ಯರ ಸಹಕಾರ ಅಗತ್ಯವಿದೆ ಎಂದು ಹೇಳಿದರು.

ಸಂಘದ ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ಬಂದಾರು ಗ್ರಾಮ ಪಂಚಾಯತು ಉಪಾಧ್ಯಕ್ಷ ಗಂಗಾಧರ ಪೂಜಾರಿ, ಸದಸ್ಯರಾದ ಶ್ರೀಮತಿ ವಿಮಲಾ ಗೌಡ, ಶ್ರೀಮತಿ ಪುಷ್ಪಾವತಿ ಹಾಗೂ ಬಂದಾರು ಮ‌. ಹಾ.ಉ. ಸಂಘದ ಅಧ್ಯಕ್ಷೆ ಶ್ರೀಮತಿ ಮಮತಾ ಗೌಡ ಕೆಲೆಂಜಿಮಾರ್, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಸಂದೇಶ್ ಕುಮಾರ್ ಹಾಗೂ ಸಹಕಾರ ಸಂಘದ ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸುಜಾಯ್ ಅವರನ್ನು ಸನ್ಮಾನಸಿ ಗೌರವಿಸಿದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಮ್ಮಯ್ಯ ಗೌಡ, ಪದ್ಮುಂಜ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಬಾಬಿ ಗೌಡ ಮಡ್ಯಲಂಡ, ಸ್ಥಳೀಯ ಪ್ರಗತಿಪರ ಕೃಷಿ ಹೊನ್ನಪ್ಪ ಗೌಡ ಸೋಣೆಕುಮೇರು, ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.


ಸಂಘದ ನಿರ್ದೇಶಕ ರಾಜೇವ್ ರೈ ಸ್ವಾಗತಿಸಿದರು. ನಿರ್ದೇಶಕ ನಾರಾಯಣ ಗೌಡ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುಪತಿ ಕೆ.ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here